5:06 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು