1:05 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು