2:17 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ 

14/06/2021, 07:30

ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇಂದ್ರ ಕೃಷಿ ಸಚಿವರ ಜತೆ ಈ ಕುರಿತು ಚರ್ಚೆ ಕೂಡ ಮಾಡಿದ್ದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮೀನುಗಾರಿಕೆಗೆ ಬಳಸುವ ಡಿಸೇಲ್ ಬೆಲೆ ಇದೀಗ ಹೆಚ್ಚಳವಾಗಿದೆ. ಕೊರೊನಾದಿಂದ ರಫ್ತಿನ ಮೇಲೂ ಪರಿಣಾಮ ಬೀರಿದೆ. ನಮ್ಮ ಹೆಚ್ಚಿನ ಮೀನು ಉತ್ಪನ್ನಗಳು ಚೀನಾ ದೇಶಕ್ಕೆ ರಫ್ತಾಗುತ್ತದೆ. ಇದೀಗ ಅಲ್ಲಿಯೂ ಕೂಡ ಸಮಸ್ಯೆ ಏರ್ಪಟ್ಟಿದೆ ಇದು ಮೀನುಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವರು ಅಭಿಪ್ರಾಯಪಟ್ಟರು.

ರಾಜ್ಯ ಸರಕಾರ ಕೊಡುವ ಕೇವಲ 3 ಸಾವಿರ ರೂ. ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರಿಕೆಗೆ ಪುನಶ್ಚೇತನ ನೀಡಬೇಕು. ಏಕ ರೂಪದ ಕಾನೂನು ತರದೆ ಹೋದರೆ ಮೀನುಗಾರಿಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮೀನುಗಾರಿಕೆ ಇದೇ ರೀತಿ ಮುಂದೆ ಸಾಗಿದರೆ ಮುಂದಿನ 10 ವರ್ಷಗಳಲ್ಲಿ ಮೀನುಗಾರಿಕೆ ಅವನತಿ ಹೊಂದುವ ಸಾಧ್ಯತೆಯ ಕುರಿತು ಭವಿಷ್ಯ ನುಡಿದಿದ್ದೆ. ಆದರೆ ಯಾರೂ ಗಂಭೀರವಾಗಿ ಇದನ್ನು ತೆಗೆದುಕೊಂಡಿರಲಿಲ್ಲ. ಇದೀಗ ದೋಣಿ ಹೊಂದಿರುವವರು, ಅವಲಂಬಿತರು, ಉದ್ದಿಮೆದಾರರು ಭೀತಿಗೊಳಗಾಗಿದ್ದಾರೆ. ಇದೇ ನೀತಿ ಸೂಕ್ತ ನಿರೂಪಣೆಯಿಲ್ಲದೆ ಮೀನುಗಾರಿಕೆ ಮುಂದುವರಿಸಿದರೆ ಅರಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳು ಸರಕಾರ ಸೇರಿ ಧೃಢವಾದ ಸಂಕಲ್ಪ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮೀನುಗಾರಿಕೆಯ ಭವಿಷ್ಯ ಚಿಂತಾಜನಕವಾಗಲಿದೆಯೆಂದು ಅವರು ನುಡಿದರು.

ರಾಜ್ಯ ಸರಕಾರ ತಕ್ಷಣಕ್ಕೆ ಡಿಸೇಲ್ ಸಬ್ಸಿಡಿ ಬಿಡುಗಡೆ ಮಾಡಬೇಕು. ಮೀನಗಾರರಿಗೆ ಕೇಂದ್ರ ಸರಕಾರದ ಎಕ್ಸೆಸ್ ತೆರಿಗೆಯಾದ 33 ರೂಪಾಯಿಂದ ವಿನಾಯಿತಿ ನೀಡಬೇಕು. ಮೀನುಗಾರರಿಗೆ ಡಿಸೇಲ್ 50 ರೂಪಾಯಿ ಒಳಗೆ ಸಿಗುವಂತಾಗಬೇಕು. ಅದು ಮೀನುಗಾರರಿಗೆ ತಾತ್ಕಾಲಿಕ ಉಪಶಮನ ನೀಡುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು