8:41 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ 

14/06/2021, 07:30

ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇಂದ್ರ ಕೃಷಿ ಸಚಿವರ ಜತೆ ಈ ಕುರಿತು ಚರ್ಚೆ ಕೂಡ ಮಾಡಿದ್ದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮೀನುಗಾರಿಕೆಗೆ ಬಳಸುವ ಡಿಸೇಲ್ ಬೆಲೆ ಇದೀಗ ಹೆಚ್ಚಳವಾಗಿದೆ. ಕೊರೊನಾದಿಂದ ರಫ್ತಿನ ಮೇಲೂ ಪರಿಣಾಮ ಬೀರಿದೆ. ನಮ್ಮ ಹೆಚ್ಚಿನ ಮೀನು ಉತ್ಪನ್ನಗಳು ಚೀನಾ ದೇಶಕ್ಕೆ ರಫ್ತಾಗುತ್ತದೆ. ಇದೀಗ ಅಲ್ಲಿಯೂ ಕೂಡ ಸಮಸ್ಯೆ ಏರ್ಪಟ್ಟಿದೆ ಇದು ಮೀನುಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವರು ಅಭಿಪ್ರಾಯಪಟ್ಟರು.

ರಾಜ್ಯ ಸರಕಾರ ಕೊಡುವ ಕೇವಲ 3 ಸಾವಿರ ರೂ. ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರಿಕೆಗೆ ಪುನಶ್ಚೇತನ ನೀಡಬೇಕು. ಏಕ ರೂಪದ ಕಾನೂನು ತರದೆ ಹೋದರೆ ಮೀನುಗಾರಿಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮೀನುಗಾರಿಕೆ ಇದೇ ರೀತಿ ಮುಂದೆ ಸಾಗಿದರೆ ಮುಂದಿನ 10 ವರ್ಷಗಳಲ್ಲಿ ಮೀನುಗಾರಿಕೆ ಅವನತಿ ಹೊಂದುವ ಸಾಧ್ಯತೆಯ ಕುರಿತು ಭವಿಷ್ಯ ನುಡಿದಿದ್ದೆ. ಆದರೆ ಯಾರೂ ಗಂಭೀರವಾಗಿ ಇದನ್ನು ತೆಗೆದುಕೊಂಡಿರಲಿಲ್ಲ. ಇದೀಗ ದೋಣಿ ಹೊಂದಿರುವವರು, ಅವಲಂಬಿತರು, ಉದ್ದಿಮೆದಾರರು ಭೀತಿಗೊಳಗಾಗಿದ್ದಾರೆ. ಇದೇ ನೀತಿ ಸೂಕ್ತ ನಿರೂಪಣೆಯಿಲ್ಲದೆ ಮೀನುಗಾರಿಕೆ ಮುಂದುವರಿಸಿದರೆ ಅರಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳು ಸರಕಾರ ಸೇರಿ ಧೃಢವಾದ ಸಂಕಲ್ಪ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮೀನುಗಾರಿಕೆಯ ಭವಿಷ್ಯ ಚಿಂತಾಜನಕವಾಗಲಿದೆಯೆಂದು ಅವರು ನುಡಿದರು.

ರಾಜ್ಯ ಸರಕಾರ ತಕ್ಷಣಕ್ಕೆ ಡಿಸೇಲ್ ಸಬ್ಸಿಡಿ ಬಿಡುಗಡೆ ಮಾಡಬೇಕು. ಮೀನಗಾರರಿಗೆ ಕೇಂದ್ರ ಸರಕಾರದ ಎಕ್ಸೆಸ್ ತೆರಿಗೆಯಾದ 33 ರೂಪಾಯಿಂದ ವಿನಾಯಿತಿ ನೀಡಬೇಕು. ಮೀನುಗಾರರಿಗೆ ಡಿಸೇಲ್ 50 ರೂಪಾಯಿ ಒಳಗೆ ಸಿಗುವಂತಾಗಬೇಕು. ಅದು ಮೀನುಗಾರರಿಗೆ ತಾತ್ಕಾಲಿಕ ಉಪಶಮನ ನೀಡುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು