1:50 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸರಕಾರ ರಚನೆ: ರಾಜ್ಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಕಿಂಗ್ ಮೇಕರ್ ಸಿಂಗಾಪುರದಲ್ಲಿ!

12/05/2023, 18:16

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ, ಅತಂತ್ರ ಸದನ ನಿರ್ಮಾಣವಾಗುತ್ತದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಭವಿಷ್ಯ ಹೇಳಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ. ಎಲ್ಲರ ದೃಷ್ಟಿ ಬೆಂಗಳೂರಿನತ್ತ ನೆಟ್ಟಿದೆ. ಅತಂತ್ರ ಸ್ಥಿತಿ ನಿರ್ಮಾಣವಾದಗಲೆಲ್ಲ ಕಿಂಗ್ ಮೇಕರ್ ಆಗಿ ಹೊರ ಹೊಮ್ಮುತ್ತಿದ್ದ ಜನತಾ ದಳದ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ಜತೆಗೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ.
ಪ್ರತಿ ವಿಧಾನಸಭೆ ಚುನಾವಣೆಯಲ್ಲೂ ಜನತಾ ದಳ 30ರಿಂದ 40 ಸ್ಥಾನಗಳನ್ನು ಪಡೆಯುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವೋಟ್ ಶೇರಿಂಗ್ ನಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅತಂತ್ರ ಸದನ ನಿರ್ಮಾಣವಾಗುತ್ತದೆ. ಶೇಕಡಾವಾರು ಮತ ಗಳಿಕೆ ಹೆಚ್ಚಿದ್ದರೂ ಅದು ಸ್ಥಾನಗಳಾಗಿ ಪರಿವರ್ತನೆಗೊಳ್ಳಲು ವಿಫಲವಾಗುತ್ತದೆ. ಇದರ ಪರಿಣಾಮವಾಗಿ 2018 ವಿಧಾನಸಭೆ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ದೊರಕ್ಕಿಲ್ಲ. ಮೊದಲ ಒಂದು ವರ್ಷ ಕಾಂಗ್ರೆಸ್ ಮತ್ತು ಜನತಾ ದಳ ಸೇರಿ ಮೈತ್ರಿ ಸರಕಾರ ನಡೆಸಿತು. ಕುಮಾರಸ್ವಾಮಿ ಅವರು ನಿರಾಯಸವಾಗಿ ಎರಡನೇ ಬಾರಿ ಮುಖ್ಯಮಂತ್ರಿಯಾದರು. ನಂತರ ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಬಳಿಕ ಬಿಜೆಪಿಯೊಳಗಿನ ಆಂತರಿಕ ವೈರುದ್ಯದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಅವರ ಶಿಷ್ಯ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. 5 ವರ್ಷಗಳ ಅವಧಿಯಲ್ಲಿ ರಾಜ್ಯ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾಯಿತು. ಸ್ಥಿರ ಸರಕಾರ ನೀಡಲು ವಿಫಲವಾಯಿತು.
ಇದೀಗ 2023ರ ಚುನಾವಣೆಯಲ್ಲಿಯೂ ಯಾರಿಗೂ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಅತಂತ್ರ ಸ್ಥಿತಿ ನಿರ್ಮಾಣವಾದರೆ ಮತ್ತೆ ಕುಮಾರಸ್ವಾಮಿ ಕಿಂಗ್ ಮೇಕರ್ ಆಗುತ್ತಾರೆ. ಸ್ವತಃ ತಾನೇ ಕಿಂಗ್ ಕೂಡ ಆಗುತ್ತಾರೆ. ಮೇ 10ರಂದು
ಮತದಾನ ಮುಗಿದ ತಕ್ಷಣ ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ಯಾರಿಗೂ ಸ್ಪಷ್ಟ ಬಹುಮತ ಇಲ್ಲ ಎಂದು ಎಕ್ಸಿಟ್ ಫೋಲ್ ಭವಿಷ್ಯ ನುಡಿದ ಬಳಿಕ ಅವರು ಕೆಲವು ಷರತ್ತುಗಳನ್ನು ಹಾಕಿದ್ದಾರೆ. ಅವರಿಗೆ ಸೈದ್ದಾಂತಿಕ ತಾಕಲಾಟ ಏನೂ ಇಲ್ಲ. ಕಾಂಗ್ರೆಸ್ ಆಗುತ್ತೆ, ಬಿಜೆಪಿಯೂ ಆಗುತ್ತೆ.
ಯಾವ ಪಕ್ಷದ ಜತೆಯೂ ಅವರು ಮೈತ್ರಿ ಸರಕಾರ ರಚಿಸಲು ಸಿದ್ದರಿದ್ದಾರೆ. ಆದರೆ ಅವರ ಷರತ್ತನ್ನು ಒಪ್ಪಿಕೊಳ್ಳಬೇಕು. ಅದೇನೆಂದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು, ಜನತಾ ದಳ ತನ್ನ ಪ್ರಣಾಳಿಕೆಯಲ್ಲಿ ಮಾಡಿದ ಆಶ್ವಾಸನೆಯನ್ನು ಜಾರಿಗೊಳಿಸಬೇಕು, ಯಾವುದೇ ಹಸ್ತಕ್ಷೇಪ ಮಾಡದೆ ಮುಖ್ಯಮಂತ್ರಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಇದು ಕುಮಾರಸ್ವಾಮಿ ಅವರ ಷರತ್ತಾಗಿದೆ.
ರಾಜ್ಯದಲ್ಲಿ ಮತ್ತೆ ತ್ರಿಶಂಕು ಸದನ ನಿರ್ಮಾಣವಾದರೆ ಮತ್ತೆ ರಾಜಕೀಯ ಅಸ್ಥಿರತೆಗೆ ಕಾರಣವಾಗುತ್ತದೆ. ಬ್ಲ್ಯಾಕ್ ಮೇಲ್ ರಾಜಕೀಯ, ಒತ್ತಡದ ರಾಜಕೀಯ ಶುರುವಾಗುತ್ತದೆ‌ ಆಪರೇಷನ್ ಕಮಲ ಮತ್ತೆ ಗರಿಗೆದರುವ ಸಾಧ್ಯತೆಯೂ ಇದೆ. ಒಂದು ಪಕ್ಷದಿಂದ ಸಾಮೂಹಿಕ ವಲಸೆ ಹೋಗುವ ಮೂಲಕ ಪಕ್ಷಾಂತರ ಕಾಯ್ದೆಯಿಂದ ನುಣುಚಿಕೊಳ್ಳುವ ಅವಕಾಶವೂ ಇದೆ. ಇದೇನಿದ್ದರೂ ನಾಳೆ ಮತ ಎಣಿಕೆ ವರೆಗೆ ಕಾಯೋದು ಅನಿವಾರ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು