11:15 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

23/12/2024, 16:31

ಬೆಂಗಳೂರು(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.


ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು
ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ.
ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು.
ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು