5:26 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಅಶ್ವಥ ಟಿ. ಮರಿಗೌಡ

04/08/2024, 19:19

ಶಿವು ರಾಠೋಡ ರಾಯಚೂರು

info.reporterkarnataka@gmail.com

ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು – ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ – ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.
ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ. ಉಪಾಧ್ಯಕ್ಷರು ಈರಣ್ಣ. ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ. ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್,ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು