7:05 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಅಶ್ವಥ ಟಿ. ಮರಿಗೌಡ

04/08/2024, 19:19

ಶಿವು ರಾಠೋಡ ರಾಯಚೂರು

info.reporterkarnataka@gmail.com

ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು – ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ – ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.
ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ. ಉಪಾಧ್ಯಕ್ಷರು ಈರಣ್ಣ. ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ. ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್,ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು