11:25 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸರಕಾರ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಅಶ್ವಥ ಟಿ. ಮರಿಗೌಡ

04/08/2024, 19:19

ಶಿವು ರಾಠೋಡ ರಾಯಚೂರು

info.reporterkarnataka@gmail.com

ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು – ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳ ಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ – ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.
ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ. ಉಪಾಧ್ಯಕ್ಷರು ಈರಣ್ಣ. ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ. ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್,ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು