9:05 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸರಕಾರದ ಆದೇಶ ತುಳುನಾಡಿನ ಜನತೆಯ ಹೋರಾಟದ ಫಲ; ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ: ಮುನೀರ್ ಕಾಟಿಪಳ್ಳ

14/11/2022, 22:04

ಸುರತ್ಕಲ್ (reporterkarnataka.com): ಸುಮಾರು 6 ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದ‌ಕ್ಷಿಣ ಕ‌ನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.

ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ. ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ,ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ದವಾಗಿ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈಸಂದರ್ಭ ಕನಿಷ್ಟ ವಿಷಾಧವನ್ನಾದರು ವ್ಯಕ್ತಪಡಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು