12:26 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸರಕಾರದ ಬಿಟ್ಟಿ ಕೆಲಸಕ್ಕೆ ಬೇಕು ಅಂಗನವಾಡಿ ಕಾರ್ಯಕರ್ತೆಯರು!: ಹತ್ತರ ಜತೆ ಹನ್ನೊಂದು ಈ ಕೊರೊನಾ ಸಮೀಕ್ಷೆ ಕೆಲಸ !!

02/06/2021, 16:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಪಂಚಾಯಿತಿ ಮಟ್ಟದ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್ ಸಮೀಕ್ಷೆ ಮಾಡುವಂತೆ ಸರಕಾರ ಆದೇಶಿಸಿದೆ. ಆದರೆ ಬಿಎಲ್ ಒ ಆಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಸರಕಾರ

ಯಾವುದೇ ಭದ್ರತೆ ನೀಡುತ್ತಿಲ್ಲ. ಕೊರೊನಾ ವಾರಿಯರ್ಸ್ ಎಂದು ಕೂಡ ಪರಿಗಣಿಸಿಲ್ಲ.

ಸರಕಾರ ಪ್ರತಿಯೊಂದು ಕೆಲಸಕ್ಕೆ ಅಂಗನವಾಡಿ ಕಾರ್ಯಕರ್ತರನ್ನು ಮುಂದೆ ತಳ್ಳುತ್ತದೆ. ಸರಕಾರ ಆದೇಶ ಪ್ರಕಾರ ಶಾಲಾ-ಕಾಲೇಜುಗಳು 

ಬಂದಾಗಿವೆ. ಆದರೆ ಅತೀ ಸಣ್ಣ ವೇತನ ಪಡೆಯುವ ಅಂಗನವಾಡಿ ಕಾರ್ಯಕರ್ತರನ್ನು

 ಪ್ರತಿಯೊಂದು ಕೆಲಸಕ್ಕೆ ನೇಮಿಸುತ್ತದೆ. ಸರಕಾರದ ಪ್ರಸ್ತುತ ಆದೇಶ ಪ್ರಕಾರ ಇವರು ಕೋವಿಡ್ ಸೋಂಕಿತರ ಮನೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿಕೊಂಡು ಮಾಹಿತಿ ಪಡೆಯಬೇಕು. ಆದರೆ 

ಸಮೀಕ್ಷೆ ನಡೆಸುವ ಇವರ ಜೀವನಕ್ಕೆ ಯಾವುದೇ ಭದ್ರತೆಯಿಲ್ಲ. ವಿಶೇಷವೆಂದರೆ ವಾಕ್ಸಿನ್ ಮಾಡಲಾಗಿದೆಯೇ ಎನ್ನುವುದನ್ನು ಕೂಡ ಸ್ಥಳೀಯ ಅಧಿಕಾರಿಗಳು ವಿಚಾರಿಸುತ್ತಿಲ್ಲ.

ಸರ್ಕಾರ ಕೂಡಲೇ ನಮ್ಮನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಸಿಗುವ ಸೌಲಭ್ಯವನ್ನು ಒದಗಿಸಬೇಕು ಹಾಗೂ ಸರಕಾರ ಘೋಷಿಸಿದ ಪ್ಯಾಕೇಜ್ ಕೊಡಬೇಕೆಂದು ಅಂಗನವಾಡಿ ಕಾರ್ಯಕರ್ತ ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಇಂದು ಯಾವುದೇ ಭದ್ರತೆ ಇಲ್ಲದೆ ಅಂತರಗಂಗೆ ಗ್ರಾಮದ ಲಲಿತಾ ಸಾಲಿಮಠ್ ಅವರು ಸಿಬ್ಬಂದಿ ವರ್ಗದಿಂದ ಕಾರ್ಯನಿರ್ವಹಿಸುವುದು ಕಂಡು ಬಂತು. 

ಇತ್ತೀಚಿನ ಸುದ್ದಿ

ಜಾಹೀರಾತು