10:49 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸರಕಾರದ ಬಿಟ್ಟಿ ಕೆಲಸಕ್ಕೆ ಬೇಕು ಅಂಗನವಾಡಿ ಕಾರ್ಯಕರ್ತೆಯರು!: ಹತ್ತರ ಜತೆ ಹನ್ನೊಂದು ಈ ಕೊರೊನಾ ಸಮೀಕ್ಷೆ ಕೆಲಸ !!

02/06/2021, 16:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಪಂಚಾಯಿತಿ ಮಟ್ಟದ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್ ಸಮೀಕ್ಷೆ ಮಾಡುವಂತೆ ಸರಕಾರ ಆದೇಶಿಸಿದೆ. ಆದರೆ ಬಿಎಲ್ ಒ ಆಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಸರಕಾರ

ಯಾವುದೇ ಭದ್ರತೆ ನೀಡುತ್ತಿಲ್ಲ. ಕೊರೊನಾ ವಾರಿಯರ್ಸ್ ಎಂದು ಕೂಡ ಪರಿಗಣಿಸಿಲ್ಲ.

ಸರಕಾರ ಪ್ರತಿಯೊಂದು ಕೆಲಸಕ್ಕೆ ಅಂಗನವಾಡಿ ಕಾರ್ಯಕರ್ತರನ್ನು ಮುಂದೆ ತಳ್ಳುತ್ತದೆ. ಸರಕಾರ ಆದೇಶ ಪ್ರಕಾರ ಶಾಲಾ-ಕಾಲೇಜುಗಳು 

ಬಂದಾಗಿವೆ. ಆದರೆ ಅತೀ ಸಣ್ಣ ವೇತನ ಪಡೆಯುವ ಅಂಗನವಾಡಿ ಕಾರ್ಯಕರ್ತರನ್ನು

 ಪ್ರತಿಯೊಂದು ಕೆಲಸಕ್ಕೆ ನೇಮಿಸುತ್ತದೆ. ಸರಕಾರದ ಪ್ರಸ್ತುತ ಆದೇಶ ಪ್ರಕಾರ ಇವರು ಕೋವಿಡ್ ಸೋಂಕಿತರ ಮನೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿಕೊಂಡು ಮಾಹಿತಿ ಪಡೆಯಬೇಕು. ಆದರೆ 

ಸಮೀಕ್ಷೆ ನಡೆಸುವ ಇವರ ಜೀವನಕ್ಕೆ ಯಾವುದೇ ಭದ್ರತೆಯಿಲ್ಲ. ವಿಶೇಷವೆಂದರೆ ವಾಕ್ಸಿನ್ ಮಾಡಲಾಗಿದೆಯೇ ಎನ್ನುವುದನ್ನು ಕೂಡ ಸ್ಥಳೀಯ ಅಧಿಕಾರಿಗಳು ವಿಚಾರಿಸುತ್ತಿಲ್ಲ.

ಸರ್ಕಾರ ಕೂಡಲೇ ನಮ್ಮನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಸಿಗುವ ಸೌಲಭ್ಯವನ್ನು ಒದಗಿಸಬೇಕು ಹಾಗೂ ಸರಕಾರ ಘೋಷಿಸಿದ ಪ್ಯಾಕೇಜ್ ಕೊಡಬೇಕೆಂದು ಅಂಗನವಾಡಿ ಕಾರ್ಯಕರ್ತ ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಇಂದು ಯಾವುದೇ ಭದ್ರತೆ ಇಲ್ಲದೆ ಅಂತರಗಂಗೆ ಗ್ರಾಮದ ಲಲಿತಾ ಸಾಲಿಮಠ್ ಅವರು ಸಿಬ್ಬಂದಿ ವರ್ಗದಿಂದ ಕಾರ್ಯನಿರ್ವಹಿಸುವುದು ಕಂಡು ಬಂತು. 

ಇತ್ತೀಚಿನ ಸುದ್ದಿ

ಜಾಹೀರಾತು