4:39 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ

17/11/2022, 23:20

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು, ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ.

ಆರ್‌ಎಸ್‌ಎಸ್‌ನ ಸಂಘನಿಕೇತನದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ.

ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು.

ಇಲಾಖೆಯನ್ನು ಆಡಳಿತ ಯಂತ್ರವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿಜಾಲ್ ಇಬ್ರಾಹಿಂ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು