3:49 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ

17/11/2022, 23:20

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು, ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ.

ಆರ್‌ಎಸ್‌ಎಸ್‌ನ ಸಂಘನಿಕೇತನದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ.

ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು.

ಇಲಾಖೆಯನ್ನು ಆಡಳಿತ ಯಂತ್ರವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿಜಾಲ್ ಇಬ್ರಾಹಿಂ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು