2:54 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ

17/11/2022, 23:20

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು, ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ.

ಆರ್‌ಎಸ್‌ಎಸ್‌ನ ಸಂಘನಿಕೇತನದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ.

ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು.

ಇಲಾಖೆಯನ್ನು ಆಡಳಿತ ಯಂತ್ರವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿಜಾಲ್ ಇಬ್ರಾಹಿಂ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು