6:45 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸರಕಾರದ ವಿಶೇಷ ಪ್ಯಾಕೇಜ್: 2.40 ಲಕ್ಷ ಕಟ್ಟಡ ಕಾರ್ಮಿಕರಿಗೆ, 86 ಸಾವಿರ ಅಸಂಘಟಿತ ಕಾರ್ಮಿಕರಿಗೆ ಇನ್ನೂ ಹಣ ಸಿಕ್ಕಿಲ್ಲ !

27/06/2021, 13:23

ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಬಿಡುಗಡೆ ಮಾಡಿದ ವಿಶೇಷ ಪ್ಯಾಕೇಜ್ ನಲ್ಲಿ ರಾಜ್ಯದಲ್ಲಿರುವ ಸುಮಾರು 2,40,000 ಕಟ್ಟಡ ಕಾರ್ಮಿಕರು ಹಾಗೂ 86,000 ಅಸಂಘಟಿತ ಕಾರ್ಮಿಕರಿಗೆ ಇನ್ನೂ ಹಣ ವರ್ಗಾವಣೆಯಾಗಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಹೇಳಿದ್ದಾರೆ.

ಲಾಕ್‌ಡೌನ್‌ ಪರಿಣಾಮವಾಗಿ ಸಂಕಷ್ಟಕ್ಕೆ ಒಳಗಾಗಿರುವ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಾಜ್ಯ ಸರಕಾರ ನೆರವು ಘೋಷಣೆ ಮಾಡಿತ್ತು. ಅದರಂತೆ, ರಾಜ್ಯದಲ್ಲಿ ಇರುವರೆಗೆ 17,80,000 ಕಟ್ಟಡ ಕಾರ್ಮಿಕರು ಮಂಡಳಿಯಲ್ಲಿ ನೋಂದಾಯಿತರಾಗಿದ್ದು, ಇದುವರೆಗೇ ಸುಮಾರು 15,40,000 ಕಾರ್ಮಿಕರಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ 3,000 ರೂ. ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹಣ ವರ್ಗಾವಣೆಯಾಗದೆ ಬಾಕಿ ಉಳಿದಿರುವ ಕಾರ್ಮಿಕರಲ್ಲಿ ಕೆಲವರ ಬ್ಯಾಂಕ್‌ ಖಾತೆಗಳನ್ನು ನಿಷ್ಕ್ರಿಯವಾಗಿರುತ್ತದೆ ಅಥವಾ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗಿರುವುದಿಲ್ಲ. ಕೂಡಲೇ ಸರಿಪಡಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಅದೇ ರೀತಿಯಲ್ಲಿ 11 ವಿವಿಧ ಅಸಂಘಟಿತ ಕಾರ್ಮಿಕರಿಗೆ ಘೋಷಿಸಲಾದ ರೂ.2,000/- ನಗದು ವರ್ಗಾವಣೆಯಲ್ಲಿ ನೋಂದಾಯಿತರಾದ 3,30,000 ಕಾರ್ಮಿಕರಲ್ಲಿ 2,44,000 ಕಾರ್ಮಿಕರಿಗೆ ಸಹಾಯಧನ ವರ್ಗಾವಣೆಯಾಗಿರುತ್ತದೆ ಎಂದು ಸಚಿವ ಹೆಬ್ಬಾರ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು