2:31 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಸರಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಜನರಿಗೆ ತಲುಪಿಸಿ: ಕೋಲಾರ ಉಸ್ತುವಾರಿ ಸಚಿವ ಮುನಿರತ್ನ 

29/01/2022, 22:05

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ  ಹೇಳಿದರು .

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಸೇವೆ ಮಾಡುವ ಮನೋಭಾವವನ್ನು ಅಧಿಕಾರಿಗಳು ಇಟ್ಟುಕೊಳ್ಳಬೇಕು. ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಪ್ರೋತ್ಸಾಹ ನೀಡುವುದು ಸರ್ಕಾರದ ಜವಬ್ದಾರಿ ಅದನ್ನು ನಾವು ಮಾಡುತ್ತೇವೆ. ಕಾಮಗಾರಿಗಳಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಬೇಕು . ಮುಂದಿನ ದಿನಗಳಲ್ಲಿ ಪ್ರತಿಯೊಂದು ಇಲಾಖೆಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡಿ ಜಿಲ್ಲೆಗೆ ಬೇಕಾಗಿರುವ ಅನುದಾನವನ್ನು ಮುಂದಿನ ಬಾರಿಯ ಬಜೆಟ್‌ನಲ್ಲಿ ಕೊಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ವೆಂಕಟರಾಜು ಅವರು ಮಾತನಾಡಿ , ನಾವು ಆರ್ಥಿಕ ವರ್ಷದ ಕೊನೆಯಲ್ಲಿ ಇದ್ದೇವೆ. ಜಿಲ್ಲೆಗೆ ಬಂದಿರುವ ಅನುದಾನ ವಾಪಸ್ ಹೋಗದಂತೆ ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. 

ಸಭೆಯಲ್ಲಿ 25 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳು ಪ್ರಗತಿ ವರಧಿಯನ್ನು ಸಂಕ್ಷಿಪ್ತವಾಗಿ ಸಭೆಯಲ್ಲಿ ವಿವರಿಸಿದರು. 

ಸಭೆಯಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ , ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ , ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು