8:15 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸರಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಜನರಿಗೆ ತಲುಪಿಸಿ: ಕೋಲಾರ ಉಸ್ತುವಾರಿ ಸಚಿವ ಮುನಿರತ್ನ 

29/01/2022, 22:05

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ  ಹೇಳಿದರು .

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಸೇವೆ ಮಾಡುವ ಮನೋಭಾವವನ್ನು ಅಧಿಕಾರಿಗಳು ಇಟ್ಟುಕೊಳ್ಳಬೇಕು. ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಪ್ರೋತ್ಸಾಹ ನೀಡುವುದು ಸರ್ಕಾರದ ಜವಬ್ದಾರಿ ಅದನ್ನು ನಾವು ಮಾಡುತ್ತೇವೆ. ಕಾಮಗಾರಿಗಳಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಬೇಕು . ಮುಂದಿನ ದಿನಗಳಲ್ಲಿ ಪ್ರತಿಯೊಂದು ಇಲಾಖೆಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡಿ ಜಿಲ್ಲೆಗೆ ಬೇಕಾಗಿರುವ ಅನುದಾನವನ್ನು ಮುಂದಿನ ಬಾರಿಯ ಬಜೆಟ್‌ನಲ್ಲಿ ಕೊಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ವೆಂಕಟರಾಜು ಅವರು ಮಾತನಾಡಿ , ನಾವು ಆರ್ಥಿಕ ವರ್ಷದ ಕೊನೆಯಲ್ಲಿ ಇದ್ದೇವೆ. ಜಿಲ್ಲೆಗೆ ಬಂದಿರುವ ಅನುದಾನ ವಾಪಸ್ ಹೋಗದಂತೆ ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. 

ಸಭೆಯಲ್ಲಿ 25 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳು ಪ್ರಗತಿ ವರಧಿಯನ್ನು ಸಂಕ್ಷಿಪ್ತವಾಗಿ ಸಭೆಯಲ್ಲಿ ವಿವರಿಸಿದರು. 

ಸಭೆಯಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ , ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ , ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು