8:19 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸರಕಾರಿ ಬಸ್ಸಿನಲ್ಲಿ ಹೆತ್ತಳಾ ತಾಯಿ!: ಹೆಣ್ಣು ಮಗುವಿಗೆ ಜನ್ಮ; ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕಿ

16/05/2023, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಗರ್ಭಿಣಿ ಮಹಿಳೆಯೊಬ್ಬರು ಹೆಣ್ಣು ಮಗುವಿನ ಜನ್ಮ ನೀಡಿದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗ ಮಧ್ಯೆ ಸಾರಿಗೆ ಬಸ್‌ನಲ್ಲಿ ನಡೆದಿದೆ.
ಕೂಲಿ ಕೆಲಸಕ್ಕೆ ಮೂಡಿಗೆರೆಗೆ ತೆರಳುತ್ತಿದ್ದ ಬಿಹಾರ ಮೂಲದ ಗರ್ಭಿಣಿ ಮಹಿಳೆಗೆ ಬಸ್‌ನಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಚಾಲಕರು ಬಸ್ ನಿಲ್ಲಿಸಿದರು. ಬಸ್ ನಿರ್ವಾಹಕಿ ವಸಂತ ಹಾಗೂ ಬಸ್‌ನಲ್ಲಿದ್ದ ಬೆಂಗಳೂರು ಮೂಲದ ಮಹಿಳೆ ಹಾಗೂ ಪ್ರಯಾಣಿಕರು ಸಹಕರಿಸಿದರು.ನಂತರ 108 ಅಂಬ್ಯಲೆನ್ಸ್‌ಗೆ ಪ್ರಯಾಣಿಕ ಸೋಮಶೇಖರ್ ಅವರು ಕರೆ ಮಾಡಿದರು.


ಅಂಬ್ಯುಲೆನ್ಸ್‌ನಲ್ಲಿ ತಾಯಿ ಮಗುವನ್ನು ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದರು.
ಕೆಎ-18 ಎಫ್-0865 ನಂಬರ್‌ನ ಸಾರಿಗೆ ಬಸ್
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು.
ಬಸ್‌ನ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಯಲದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು