8:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

05/07/2022, 15:26

ಹುಬ್ಬಳ್ಳಿ (Reporterkarnataka.com)
ಹಾಡಹಗಲೇ ನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ್ರಾಮವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ಬೆಳಗ್ಗೆ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಕುಳಿತಿದ್ದರು. ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ಯುವಕರಿಬ್ಬರು ನಿಂತರು. ಗುರೂಜಿ ಅವರು ಖುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಇಬ್ಬರೂ ಸಮೀಪಕ್ಕೆ ಆಗಮಿಸಿದ್ದಾರೆ. ಒಬ್ಬ ಗುರೂಜಿ ಅವರ ಕಾಲು ಮುಟ್ಟಿ ನಮಸ್ಕರಿಸಿ ಮೇಲಕ್ಕೆ ಏಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಮತ್ತೊಬ್ಬ ಗುರೂಜಿಗೆ ಚಾಕುವಿನಿಂದ ಇರಿದಿದ್ದಾನೆ. ಏನಾಗ್ತಿದೆ ಎಂದು ಅರಿಯುವಷ್ಟರಲ್ಲಿ ಇಬ್ಬರೂ ಗುರೂಜಿಯನ್ನ ರಿಸೆಪ್ಶನ್​ನಲ್ಲೇ ಅಟ್ಟಾಡಿಸಿಕೊಂಡು 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಬಳಿಕ ಚಾಕು ಹಿಡಿದುಕೊಂಡೇ ಹೋಟೆಲ್​ನಿಂದ ಹೊರ ಓಡಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕೆಲವರು ಭಯದಿಂದ ದೂರ ಓಡಿದ್ದಾರೆ.

ಹೋಟೆಲ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಿಡಿಸಿಕೊಳ್ಳಲು ಬಂದರೂ ಅವರಿಗೂ ಬೆದರಿಸಿದ ಹಂತಕರು, ಸ್ಥಳದಲ್ಲೇ ಮೃತಪಡುವವರೆಗೂ ಗುರೂಜಿಗೆ ಚುಚ್ಚಿ ಚುಚ್ಚಿ ಕೊಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದ ಚಂದ್ರಶೇಖರ ಗುರೂಜಿ ಅವರು ಹುಬ್ಬಳ್ಳಿಯ ಉಣಕಲ್​ನ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಗುರೂಜಿ ಅವರನ್ನ ಭೇಟಿಯಾಗಲು ಬಂದಿದ್ದರು. ಅವರೇ ಗುರೂಜಿಯನ್ನ ಕೊಂದಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನವೊಂದು ಹಂತಕರ ಜಾಡು ಹಿಡಿದು ಹೊರಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು