1:22 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಸರಪಾಡಿ: ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಚೆಂಡೆ ವಾದಕರಾದ ಚಂದ್ರಶೇಖರರಿಗೆ ಹಸ್ತಾಂತರ

25/10/2024, 18:57

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರ ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಸರಪಾಡಿಯಲ್ಲಿ ನಿರ್ಮಿಸಿದ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ ಮೇಳದ ಚೆಂಡೆ ವಾದಕರಾದ ಚಂದ್ರಶೇಖರ ಅವರಿಗೆ ಹಸ್ತಾಂತರಿಸಲಾಯಿತು.


ಖ್ಯಾತ ಉದ್ಯಮಿ ರಘುನಾಥ ಸೋಮಯಾಜಿಯವರ ಕೊಡುಗೆಯ ಈ ಮನೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಕಲಾಪೋಷಕರಾದ ಆರ್. ಕೆ. ಭಟ್ ಬೆಂಗಳೂರು, ಟ್ರಸ್ಟಿನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ. ಭಂಡಾರಿ, ಟ್ರಸ್ಟಿನ ಸರಪಾಡಿ ಘಟಕದ ಸಂಚಾಲಕರಾದ ಸರಪಾಡಿ ಅಶೋಕ್ ಶೆಟ್ಟಿ, ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಗೌರವಾಧ್ಯಕ್ಷರಾದ ಜಗನ್ನಾಥ ಚೌಟ, ಶ್ರೀಕಾಂತ್ ಅರಳ ಇನ್ನಿತರರು ಭಾಗವಹಿಸಿದರು. ಸರಪಾಡಿ ಘಟಕದ ಕಾರ್ಯದರ್ಶಿಗಳಾದ ಧನಂಜಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು