12:53 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಸರಕಾರ ಶಬ್ದ ಮಾಲಿನ್ಯದ ಬಗ್ಗೆ  ಸ್ಪಷ್ಟ ನಿಯಮ ಜಾರಿಗೆ ತರಲಿ: ಪ್ರತಿಪಕ್ಷದ ಉಪ ನಾಯಕ ಖಾದರ್ ಆಗ್ರಹ

24/05/2022, 07:52

ಮಂಗಳೂರು(reporterkarnataka.com): ಶಬ್ದ ಮಾಲಿನ್ಯದ ಬಗ್ಗೆ ಸುಪ್ರಿಂ ಕೋರ್ಟ್ ಆದೇಶ ನೀಡಿದ್ದು, ಇದರ ಬಗ್ಗೆ ಸರ್ಕಾರ ಸ್ಪಷ್ಟ ನಿಯಮವನ್ನು ತರದೆ ಜನರನ್ನು ಗೊಂದಲಕ್ಕೆ ತಳ್ಳುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ಉಪನಾಯಕ
ಯು.ಟಿ. ಖಾದರ್ ಒತ್ತಾಯಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಶಬ್ದ ಮಾಲಿನ್ಯದ ಬಗ್ಗೆ ಅಧಿಕಾರಿಗಳಲ್ಲಾಗಲಿ ಜನ ಪ್ರತಿನಿಧಿಗಳಲ್ಲಾಗಲಿ ಕೇಳಿದರೆ ಅವರಿಗೆ ಏನೂ ಗೊತ್ತಿಲ್ಲ. ಆದುದರಿಂದ ಜನರು ಗೊಂದಲದಲ್ಲಿದ್ದಾರೆ ಅದನ್ನು ನಿವಾರಿಸಬೇಕು ಎಂದರು.

ಭಾರತ ದೇಶವು ಕಾನೂನು ಮತ್ತು ನಿಯಮಗಳಿಗಿಂತ ಹೆಚ್ಚಾಗಿ ಸಾಂಪ್ರದಾಯ ಹಾಗೂ ಸಂಸ್ಕೃತಿಯಲ್ಲಿ ನಡೆಯುತ್ತಿದ್ದು, ರಾತ್ರಿ ೧೦ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯ ತನಕ ಶಬ್ದ ಮಾಲಿನ್ಯ ಮಾಡದಂತೆ ಆದೇಶವನ್ನು ಹೊರಡಿಸಿದ್ದು, ನಮ್ಮ ಸಾಂಪ್ರದಾಯಗಳಾದ ಕೋಲ, ನಾಟಕ, ಉರೂಸ್ ಮೊದಲಾದವುಗಳನ್ನು ಮಾಡಬೇಡಿ ಎನ್ನುವುದಾದರೆ ನಮ್ಮ ಯುವಜನರಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಹೇಗೆ ತಿಳಿಸಿಕೊಡುವುದು. ಈ ನಿಯಮದಿಂದಾಗಿ ಭ್ರಷ್ಟಚಾರ ಹೆಚ್ಚಾಗುತ್ತದೆಯೇ ಹೊರತು ಬೇರೆನೂ ಪ್ರಯೋಜನವಿಲ್ಲ ಎಂದರು.

ನಾರಾಯಣಗುರು ವಿಚಾರವನ್ನು ಪಠ್ಯ ಪುಸ್ತಕದಿಂದ ತೆಗೆದು ಹಾಕಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪಠ್ಯ ಪುಸ್ತಕ ಮುದ್ರಣವಾಗುವ ಮೊದಲು ಪಿಡಿಎಫ್ ಫೈಲ್ ಅನ್ನು ಬಿಟ್ಟಿದ್ದು, ಅದನ್ನು ಈ ಯಾಕೆ ಡಿಲಿಟ್ ಮಾಡಿದ್ದಾರೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಬೇರೆ ಯಾರಾದರೂ ಬಂದು ಅಪ್‌ಲೋಡ್ ಮಾಡುತ್ತಾರಾ ಎಂದು ಯು.ಟಿ. ಖಾದರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು