2:04 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು