2:06 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು