7:36 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು