3:01 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸರಕಾರಿ ಜಾಬ್ ಗಳ ಮಾರಾಟ ಮಾಡುವ ಗ್ಯಾಂಗ್‌ನ್ನು ಹೊರಗೆ ತರ್ತೇವೆ; ದಿವ್ಯ ಹಾಗರಗಿ ಆಸ್ತಿ ಮುಟ್ಟುಗೋಲು: ಗೃಹ ಸಚಿವ

29/04/2022, 00:20

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕುರಿತಂತೆ ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಸಿಎಂ ಗಮನಕ್ಕೆ ತಂದು ಮಾಡಿದ್ದೇವೆ. ಹಣಕ್ಕೆ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್‌ನ್ನು ಹೊರಗೆ ತರ್ತೇವೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮಾಧ್ಯಮದ ಜತೆ ಮಾತನಾಡಿದ ಅವರು, ಪಿಎಸ್‌ಐ ಪರೀಕ್ಷೆ ಅಕ್ರಮದಲ್ಲಿ ಇದುವರೆಗೂ ದಿವ್ಪ್ಕ್ಸ, ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವ್ರು ಊರು ಬಿಟ್ಟಿದ್ದಾರೆ. ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಯುವತಿಯ ಮೇಲೆ ಆಯಸಿಡ್ ದಾಳಿ ಬಗ್ಗೆ ಮಾತನಾಡಿದ ಅವರು, ನಾಗೇಶ್ ಎಂಬುವ ಯುವಕ ಯುವತಿ ಮೇಲೆ ಆಸಿಡ್ ಹಾಕ್ತಾನೆ. ನಾನು ಪ್ರೀತಿಸ್ತಿದ್ದೆ, ಮದುವೆಯಾಗಬೇಕು ಅಂತಾ ಆಸಿಡ್ ಹಾಕಿದ್ದಾನೆ. ಇದೊಂದು ಅಮಾನುಷ ಕೃತ್ಯ, ಪೊಲೀಸರು ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು.

ವಿಚಾರಣೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಹಾಜರಾಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕಾ ಖರ್ಗೆ ಅನೇಕ ಆರೋಪ ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಇವ್ರು ತನಿಖೆಗೆ ಸಹಕಾರ ಕೊಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ಅವ್ರು ದಾಖಲೆ ಕೊಡಬಹುದು ಅಲ್ವಾ..? ಅವ್ರ ತಂದೆ ಎಷ್ಟು ದೊಡ್ಡವರು..? ಅವರಿಗೆ ತನಿಖೆ ಬಗ್ಗೆ ಗೊತ್ತಿಲ್ವಾ..? ಅವರನ್ನು ಏನು ಅರೆಸ್ಟ್ ಮಾಡ್ತಾರಾ..? ವಿಚಾರಣೆ ತಾನೇ ಮಾಡೋದು, ಅವರ ಬಳಿ ಇರೋದ ದಾಖಲೆ ಕೊಡಲಿ. ಬುಟ್ಟಿಯಲ್ಲಿ ಹಾವು ಇಟ್ಟುಕೊಂಡು ಬಿಡ್ತೀನಿ ಅನ್ನೋದು ಎಷ್ಟು ಸರೀ..? ಎಂದು ಕಿಡಿಕಾರಿದರು.

ಅಮೃತ್ ಪೌಲ್ ವರ್ಗಾವಣೆ ವಿಚಾರವಾಗಿ ಮಾತನಾಡಿ, ವರ್ಗಾವಣೆ ಸಹಜ ಪ್ರಕ್ರಿಯೆಯಾಗಿದೆ. ಹಾಗಂತ ಅವರನ್ನು ಅಪರಾಧಿ ಅನ್ನೋದು ಸರಿಯಲ್ಲ. ತನಿಖೆಯಲ್ಲಿ ಯಾರ ಹೆಸರು ಬರುತ್ತೋ ಅವರೇ ತಪ್ಪಿತಸ್ಥರು ಆಗ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು