12:54 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು