4:25 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು