9:57 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು