8:45 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

25/09/2024, 21:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾರದ 6 ದಿನಗಳಲ್ಲೂ ಮಕ್ಕಳಿಗೆ ಮೊಟ್ಟೆ ನೀಡಬೇಕೆಂದು ಸರ್ಕಾರ ಅದೇಶಿಸಿದ ಹಿನ್ನಲೆಯಲ್ಲಿ ಪಟ್ಟಣದ ಸಿಬಿನಕೆರೆ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಮೊಟ್ಟೆಗಾಗಿ ತಟ್ಟೆ ಹಿಡಿದು ಒಂದು ಘಂಟೆಗೂ ಜಾಸ್ತಿ ಹೊತ್ತು ಕಾದು ಕೂರುವ ಪರಿಸ್ಥಿತಿ ಸಿಬಿನಕೆರೆ ಶಾಲೆಯ ಪುಟ್ಟ ಪುಟ್ಟ ಮಕ್ಕಳಾದ್ದಾಗಿತ್ತು.

ಹೌದು, ತೀರ್ಥಹಳ್ಳಿಯ ಸೀಬಿನಕೆರೆ ಸರ್ಕಾರಿ ಶಾಲೆಯಲ್ಲಿ ಅದರಲ್ಲೂ ಶಾಸಕ ಆರಗ ಜ್ಞಾನೇಂದ್ರ ಅವರು ದತ್ತು ಪಡೆದ ಶಾಲೆಯಲ್ಲಿ ಪೌಷ್ಟಿಕ ಆಹಾರವನ್ನು ನೀಡಲು ಉದ್ಘಾಟನಾ ಕಾರ್ಯಕ್ರಮ ಬುಧವಾರ ಆಯೋಜನೆ ಮಾಡಲಾಗಿತ್ತು. ಆದರೆ ಶಾಸಕರು ಹೊಸನಗರ ಕಾರ್ಯಕ್ರಮಕ್ಕೆ ಹೋಗಿದ್ದ ಕಾರಣ ಸಮಯದ ಅಭಾವದಿಂದ ಶಾಲೆಯ ಪೌಷ್ಟಿಕ ಆಹಾರದ ಉದ್ಘಾಟನೆ ಆಗಮಿಸಲಿಲ್ಲ. ಆದರೂ ಕೂಡ ಮಕ್ಕಳ ಬಗ್ಗೆ ವಿಶೇಷ ಕಾಳಜಿಯಿಂದ ದೂರವಾಣಿ ಮೂಲಕ ಶಾಸಕರು ಕಾರ್ಯಕ್ರಮಕ್ಕೆ ಸಕಾಲಕ್ಕೆ ಬರಲು ಆಗುವುದಿಲ್ಲ ಯಾವುದೇ ಕಾರಣಕ್ಕೂ ಚಿಕ್ಕ ಚಿಕ್ಕ ಮಕ್ಕಳನ್ನು ಕಾಯಿಸುವುದು ಬೇಡ. ನೀವು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಮಾಮೂಲಿ ಕಾರ್ಯಕ್ರಮದಂತೆ, ಪ್ರಾಸ್ತಾವಿಕ ನುಡಿ, ಭಾಷಣ ಎಂದು ಮಕ್ಕಳನ್ನು 1 ಗಂಟೆಗಳ ಕಾಲ ಕಾಯಿಸಲಾಯಿತು. 1 ಗಂಟೆಯ ಬದಲಾಗಿ 2 :15ಕ್ಕೆ ಚಿಕ್ಕ ಚಿಕ್ಕ ಮಕ್ಕಳಿಗೆ ಮೊಟ್ಟೆ ನೀಡಲಾಯಿತು. ಸರಿ ಸುಮಾರು 1 ಗಂಟೆಗೂ ಅಧಿಕ ಕಾಲ ಮೊಟ್ಟೆಗಾಗಿ ಮಕ್ಕಳೆಲ್ಲರೂ ತಟ್ಟೆ ಹಿಡಿದು ಹಸಿವಿನಿಂದ ಕುಳಿತಿದ್ದರು. ಈ ಸಮಯದಲ್ಲಿ ಭಾಷಣ ಬೇಕಾ ಎಂಬಂತೆ ಮಕ್ಕಳ ಮುಖದ ಭಾವನೆ ಹೇಳುತ್ತಿತ್ತು. ಇಂತಹ ಕಾರ್ಯಕ್ರಮದಲ್ಲಿ ಭಾಷಣ ಬೇಡ ಎಂಬುದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು