12:52 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

25/09/2024, 21:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾರದ 6 ದಿನಗಳಲ್ಲೂ ಮಕ್ಕಳಿಗೆ ಮೊಟ್ಟೆ ನೀಡಬೇಕೆಂದು ಸರ್ಕಾರ ಅದೇಶಿಸಿದ ಹಿನ್ನಲೆಯಲ್ಲಿ ಪಟ್ಟಣದ ಸಿಬಿನಕೆರೆ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಮೊಟ್ಟೆಗಾಗಿ ತಟ್ಟೆ ಹಿಡಿದು ಒಂದು ಘಂಟೆಗೂ ಜಾಸ್ತಿ ಹೊತ್ತು ಕಾದು ಕೂರುವ ಪರಿಸ್ಥಿತಿ ಸಿಬಿನಕೆರೆ ಶಾಲೆಯ ಪುಟ್ಟ ಪುಟ್ಟ ಮಕ್ಕಳಾದ್ದಾಗಿತ್ತು.

ಹೌದು, ತೀರ್ಥಹಳ್ಳಿಯ ಸೀಬಿನಕೆರೆ ಸರ್ಕಾರಿ ಶಾಲೆಯಲ್ಲಿ ಅದರಲ್ಲೂ ಶಾಸಕ ಆರಗ ಜ್ಞಾನೇಂದ್ರ ಅವರು ದತ್ತು ಪಡೆದ ಶಾಲೆಯಲ್ಲಿ ಪೌಷ್ಟಿಕ ಆಹಾರವನ್ನು ನೀಡಲು ಉದ್ಘಾಟನಾ ಕಾರ್ಯಕ್ರಮ ಬುಧವಾರ ಆಯೋಜನೆ ಮಾಡಲಾಗಿತ್ತು. ಆದರೆ ಶಾಸಕರು ಹೊಸನಗರ ಕಾರ್ಯಕ್ರಮಕ್ಕೆ ಹೋಗಿದ್ದ ಕಾರಣ ಸಮಯದ ಅಭಾವದಿಂದ ಶಾಲೆಯ ಪೌಷ್ಟಿಕ ಆಹಾರದ ಉದ್ಘಾಟನೆ ಆಗಮಿಸಲಿಲ್ಲ. ಆದರೂ ಕೂಡ ಮಕ್ಕಳ ಬಗ್ಗೆ ವಿಶೇಷ ಕಾಳಜಿಯಿಂದ ದೂರವಾಣಿ ಮೂಲಕ ಶಾಸಕರು ಕಾರ್ಯಕ್ರಮಕ್ಕೆ ಸಕಾಲಕ್ಕೆ ಬರಲು ಆಗುವುದಿಲ್ಲ ಯಾವುದೇ ಕಾರಣಕ್ಕೂ ಚಿಕ್ಕ ಚಿಕ್ಕ ಮಕ್ಕಳನ್ನು ಕಾಯಿಸುವುದು ಬೇಡ. ನೀವು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಮಾಮೂಲಿ ಕಾರ್ಯಕ್ರಮದಂತೆ, ಪ್ರಾಸ್ತಾವಿಕ ನುಡಿ, ಭಾಷಣ ಎಂದು ಮಕ್ಕಳನ್ನು 1 ಗಂಟೆಗಳ ಕಾಲ ಕಾಯಿಸಲಾಯಿತು. 1 ಗಂಟೆಯ ಬದಲಾಗಿ 2 :15ಕ್ಕೆ ಚಿಕ್ಕ ಚಿಕ್ಕ ಮಕ್ಕಳಿಗೆ ಮೊಟ್ಟೆ ನೀಡಲಾಯಿತು. ಸರಿ ಸುಮಾರು 1 ಗಂಟೆಗೂ ಅಧಿಕ ಕಾಲ ಮೊಟ್ಟೆಗಾಗಿ ಮಕ್ಕಳೆಲ್ಲರೂ ತಟ್ಟೆ ಹಿಡಿದು ಹಸಿವಿನಿಂದ ಕುಳಿತಿದ್ದರು. ಈ ಸಮಯದಲ್ಲಿ ಭಾಷಣ ಬೇಕಾ ಎಂಬಂತೆ ಮಕ್ಕಳ ಮುಖದ ಭಾವನೆ ಹೇಳುತ್ತಿತ್ತು. ಇಂತಹ ಕಾರ್ಯಕ್ರಮದಲ್ಲಿ ಭಾಷಣ ಬೇಡ ಎಂಬುದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು