1:34 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಸರಕಾರಿ ಅ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಆರಂಭಿಸಲಿ: ಬಿ.ಕೆ. ಇಮ್ತಿಯಾಝ್

12/09/2023, 21:14

ಮಂಗಳೂರು(reporterkarnataka.com): ಅ್ಯಪ್ ಆಧಾರಿತ ರೇಡಿಯೋ ಟ್ಯಾಕ್ಸಿ ಕಂಪೆನಿಗಳು ಚಾಲಕರಿಗೆ ಸರಿಯಾದ ಪ್ರಯಾಣ ದರ ನೀಡದೆ ವಂಚಿಸುತ್ತಿದೆ. ಬ್ಯಾಂಕ್ ಸಾಲ ಮಾಡಿ ಕಾರು ಖರೀದಿಸಿದ ಚಾಲಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ರೇಡಿಯೋ ಟ್ಯಾಕ್ಸಿ ಚಾಲಕರಿದ್ದು ಸಂಕಷ್ಟದಲ್ಲಿರುವ ಚಾಲಕರಿಗಾಗಿ ಮತ್ತು ಉತ್ತಮ ಸಾರ್ವಜನಿಕ ಸಾರಿಗೆ ಸೇವೆಗಾಗಿ ಸರಕರವೇ ಅ್ಯಪ್ ಆಧಾರಿತ ರೇಡಿಯೋ ಟ್ಯಾಕ್ಸಿ ಸೇವೆ ಆರಂಭಿಸಬೇಕೆಂದು ಸಾಮಾಜಿಕ ಹೋರಾಟಗಾರ ಬಿ.ಕೆ. ಇಮ್ತಿಯಾಝ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಅವರು ಇಂದು ನಗರದ ನಾಸಿಕ್ ಬಂಗೇರ ಸಭಾಭಾವನದಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಆನ್ ಲೈನ್ ಟ್ಯಾಕ್ಸಿ ಚಾಲಕರ ಸಂಘದ ಮಹಾಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ರಾಜ್ಯದಲ್ಲಿ ಸಾರಿಗೆ ರಂಗದ ನೌಕರರ ಹೋರಾಟ ತೀವ್ರಗೊಳ್ಳುತ್ತಿದೆ. ಸರಕಾರಕ್ಕೆ ಹೆಚ್ಚಿನ ರೀತಿಯಲ್ಲಿ ತೆರಿಗೆ ಪಾವತಿಸುವ ಸಾರ್ವಜನಿಕ ಸಾರಿಗೆ ರಂಗದ ಚಾಲಕರ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕೆಂದು ಅವರು ಒತ್ತಾಯಿಸಿದ ಅವರು ಮಂಗಳೂರು ನಗರದಲ್ಲಿ ಆನ್ ಲೈನ್ ಟ್ಯಾಕ್ಸಿ ಚಾಲಕರು ದಿನದ 24ಗಂಟೆಯೂ ಸೇವೆಯಲ್ಲಿ ನಿರತರಾಗಿದ್ದಾರೆ. ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಆನ್ ಲೈನ್ ಟ್ಯಾಕ್ಸಿ ಚಾಲಕರಿಗೆ ದೌರ್ಜನ್ಯ ನಡೆಸಲಾಗುತ್ತಿದೆ. ಆನ್ ಲೈನ್ ಟ್ಯಾಕ್ಸಿ ಚಾಲಕರು ಒಗ್ಗಟ್ಟಾಗಿ ದಬ್ಬಾಳಿಕೆಯ ವಿರುದ್ಧ ಹೋರಾಟಕ್ಕಿಳಿಯಬೇಕೆಂದು ಇಮ್ತಿಯಾಝ್ ಕರೆ ನೀಡಿದರು.
ಸಂಘದ ಮುಖಂಡರಾದ ಮುನಾವ್ವರ್ ಕುತ್ತಾರ್, ಸಲ್ಮಾನ್, ನೆಲ್ಸನ್ ಮತ್ತಿತರರು ಮಾತನಾಡಿದರು. ಸಂಘದ ಅಧ್ಯಕ್ಷ ರವೀಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಮೇಶ್ ನಾಯ್ಕ್, ಕರುಣಾಕರ, ಅಶ್ರಫ್ ಕಲ್ಲಡ್ಕ, ಜೋಸೆಫ್, ಸಾದಿಕ್ ಕಣ್ಣೂರು, ಶಾಕಿರ್ ಕಂಕನಾಡಿ, ಅಲ್ತಾಫ್ ಉಳ್ಳಾಲ, ಮುಸ್ತಫಾ ಕುತ್ತಾರ್, ಜಲೀಲ್, ಕಲೀಂ ಮದನಿ, ಅಜೀಜ್ ಅಡ್ಡೂರು, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು. ಕೋಶಾಧಿಕಾರಿ ನೌಶಾದ್ ಕಾವೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಮ್ತಿಯಾಜ್ ಕುತ್ತಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು