9:13 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ವಕೀಲರಿಂದ ಹಲ್ಲೆ ಆರೋಪ: ವೈದ್ಯ ಸಿಬ್ಬಂದಿಗಳಿಂದ ಪ್ರತಿಭಟನೆ: ಆರೋಪಿ ಬಂಧನಕ್ಕೆ ಆಗ್ರಹ

03/01/2024, 19:00

ಬೆಳಗಾವಿ(reporterkarnataka.com):ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ
ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಆಸ್ಪತ್ರೆ ಸಿಬ್ಬಂದಿಗಳು ಇಂದು ಮುಂಜಾನೆಯಿಂದ ಪ್ರತಿಭಟನೆ ನಡೆಸಲಾರಂಭಿಸಿದರು. ತಡರಾತ್ರಿ ಆಸ್ಪತ್ರೆ ಸಿಬ್ಬಂದಿ ಬಸವರಾಜ ಘೂಳಪ್ಪನ್ನವರ ಎಂಬುವರ ಮೇಲೆ ಹಲ್ಲೆ ನಡೆಸಲಾಗಿತ್ತು.
ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ವಕೀಲ ದಯಾನಂದ್ ವಾಘ್ಮೋರೆ ಎಂಬುವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಪ್ರತಿಭಟನೆ ನಡೆಸಿದ್ದಾರೆ.
ಆರೋಪಿಯನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.


ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಇತ್ತೀಚಿನ ಸುದ್ದಿ

ಜಾಹೀರಾತು