6:39 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

17/06/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದರು.
ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಒಂದು ಬಸ್ ಗಳು ಇರುವುದರಿಂದ ಬಸ್ ಭರ್ತಿಯಾಗಿರುವ ಬರುತ್ತಿವೆ. ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ. ಬಸ್ ಕಾಯುತ್ತೇವೆ ಇಲ್ಲವಾದರೆ ಬಸ್ ನಿಲ್ದಾಣದಲ್ಲೇ ಮಲಗುತ್ತೇವೆ. ಸರ್ಕಾರ ಹೊರನಾಡಿಗೆ ಹೆಚ್ಚು ಬಸ್ ಗಳನ್ನು ಬಿಟ್ಟು ಮಹಿಳೆಯರಿಗೆ ದೇವಸ್ಥಾನಕ್ಕೆ ತೆರಳಲು ಸಹಕರಿಸಬೇಕು ಎಂದು ಬೇಲೂರಿನ ಮಹಿಳೆ ಶಕುಂತಲಾ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಾಜ್ಯದ ಒಳಗಡೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸ ತಂದಿದೆ.ಆದರೆ ಬಸ್ ಗಳ ಕೊರತೆಯಿಂದ ನಿರೀಕ್ಷಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಬಸ್ ಪ್ರಯಾಣಿಕರಿಂದ ಭರ್ತಿಯಾಗಿ ಬರುವುದರಿಂದ ಬಸ್ ಹತ್ತಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು