3:15 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಕಾದು ಸುಸ್ತಾದ ಮಹಿಳೆಯರು : ಹೊರನಾಡಿಗೆ ಸಾಗಲು ಮಹಿಳೆಯರ ಪರದಾಟ

17/06/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಸರ್ಕಾರ ಉಚಿತ ಬಸ್ ನಲ್ಲಿ ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಮಹಿಳೆಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದರು.
ಆದರೆ ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್ ಸಂಜೆ 3.30ಗೆ ಕೆಲವೇ ಒಂದು ಬಸ್ ಗಳು ಇರುವುದರಿಂದ ಬಸ್ ಭರ್ತಿಯಾಗಿರುವ ಬರುತ್ತಿವೆ. ಇದರಿಂದ ಬೆಳಿಗ್ಗೆಯಿಂದಲೇ ವಿವಿಧ ಊರುಗಳಿಂದ ಬಂದ ಮಹಿಳೆಯರು ಬಸ್ ಕಾದು ಸುಸ್ತಾಗುತ್ತಿದ್ದಾರೆ. ಬಸ್ ಕಾಯುತ್ತೇವೆ ಇಲ್ಲವಾದರೆ ಬಸ್ ನಿಲ್ದಾಣದಲ್ಲೇ ಮಲಗುತ್ತೇವೆ. ಸರ್ಕಾರ ಹೊರನಾಡಿಗೆ ಹೆಚ್ಚು ಬಸ್ ಗಳನ್ನು ಬಿಟ್ಟು ಮಹಿಳೆಯರಿಗೆ ದೇವಸ್ಥಾನಕ್ಕೆ ತೆರಳಲು ಸಹಕರಿಸಬೇಕು ಎಂದು ಬೇಲೂರಿನ ಮಹಿಳೆ ಶಕುಂತಲಾ ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಾಜ್ಯದ ಒಳಗಡೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸ ತಂದಿದೆ.ಆದರೆ ಬಸ್ ಗಳ ಕೊರತೆಯಿಂದ ನಿರೀಕ್ಷಿತ ಸಮಯಕ್ಕೆ ತಲುಪಲಾಗುತ್ತಿಲ್ಲ. ಬಸ್ ಪ್ರಯಾಣಿಕರಿಂದ ಭರ್ತಿಯಾಗಿ ಬರುವುದರಿಂದ ಬಸ್ ಹತ್ತಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು