10:36 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆಯೇ?: ಹಾಗಾದರೆ 8ರಿಂದ ದೂರು ದಾಖಲಿಸಿ

04/12/2021, 00:17

ಮಂಗಳೂರು (reporterkarnataka.com): ಇದೇ ಡಿ.8ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಮತ್ತು ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ.

ಕಡಬ ತಾಲೂಕಿನ ದೂರುಗಳನ್ನು ಕಡಬ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಡಿಸೆಂಬರ್ 8ರ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 9ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಅಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 14ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಪುತ್ತೂರು ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 14 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಮೂಡಬಿದ್ರೆ ತಾಲೂಕಿನ ನಿರೀಕ್ಷಣಾ ಮಂದಿರಲ್ಲಿ ಮೂಡಬಿದ್ರೆ ತಾಲೂಕಿಗೆ ಸಂಬಂಧಪಟ್ಟ ದೂರುಗಳನ್ನು ಡಿಸೆಂಬರ್ 15 ರಂದು  ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು  ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು