11:44 AM Monday27 - October 2025
ಬ್ರೇಕಿಂಗ್ ನ್ಯೂಸ್
Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ…

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್

16/07/2022, 09:49

ಬೆಂಗಳೂರು(reporterkarnataka.com):  ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ.

ರಾಜ್ಯ ಸರಕಾರದ ಅಧೀನಕ್ಕೊಳಪಟ್ಟ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ಸರಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಸರಕಾರಿ ನೌಕರರ ಮನವಿಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಿತ್ತು. ಆದರೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆದಿದೆ.

ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ. ಕಚೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ  ಮಾಹಿತಿ ಲಭ್ಯವಾಗುತ್ತದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು