10:02 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್

16/07/2022, 09:49

ಬೆಂಗಳೂರು(reporterkarnataka.com):  ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ.

ರಾಜ್ಯ ಸರಕಾರದ ಅಧೀನಕ್ಕೊಳಪಟ್ಟ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ಸರಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಸರಕಾರಿ ನೌಕರರ ಮನವಿಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಿತ್ತು. ಆದರೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆದಿದೆ.

ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ. ಕಚೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ  ಮಾಹಿತಿ ಲಭ್ಯವಾಗುತ್ತದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು