9:33 AM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್

16/07/2022, 09:49

ಬೆಂಗಳೂರು(reporterkarnataka.com):  ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ.

ರಾಜ್ಯ ಸರಕಾರದ ಅಧೀನಕ್ಕೊಳಪಟ್ಟ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ಸರಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಸರಕಾರಿ ನೌಕರರ ಮನವಿಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಿತ್ತು. ಆದರೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆದಿದೆ.

ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ. ಕಚೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ  ಮಾಹಿತಿ ಲಭ್ಯವಾಗುತ್ತದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು