4:06 AM Monday23 - June 2025
ಬ್ರೇಕಿಂಗ್ ನ್ಯೂಸ್
ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ನೂತನ ಕಟ್ಟಡದ ಮೇಲ್ಚಾವಣಿ ಕುಸಿತ: 1ನೇ ತರಗತಿ ವಿದ್ಯಾರ್ಥಿ ತಲೆಗೆ ತೀವ್ರ ಗಾಯ

11/07/2024, 21:29

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು-08 ಹಟ್ಟಿ ಚಿನ್ನದ ಗಣಿ ಸಮೀಪದ ಆನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ಶಾಲಾ ಕೊಠಡಿ ಕುಸಿದು ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ತಲೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಾಯಾಳು ವಿದ್ಯಾರ್ಥಿ ದಾಖಲಿಸಲಾಗಿದ್ದು 5 ಹೊಲಿಗೆಗಳು ಹಾಕಲಾಗಿದೆ.
ನೂತನವಾಗಿ ನಿರ್ಮಾಣಗೊಂಡ ಕಟ್ಟಡ ಸಂಪೂರ್ಣವಾಗಿ ಕಳಪೆಯಾಗಿದ್ದು, ಈ ಘಟನೆಯ ಹೊಣೆಯನ್ನು ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಹಾಗೂ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆಯವರೆ ಹೊರಬೇಕು ಕಾರಣ ಇವರಗಳ ಮೇಲೆ ಸೂಕ್ತ ಕಾನೂನು ಕ್ರಮ ಆಗಬೇಕು. ಗುತ್ತಿಗೆದಾರನ ಲೈಸೆನ್ಸ್ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಯ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಸಂಬಂಧಪಟ್ಟ ಇಲಾಖೆ ಹಾಗೂ ತಾಲೂಕಾ ಆಡಳಿತ ಕೊಡಬೇಕು. ನಿರ್ಲಕ್ಷ್ಯವಹಿಸಿದರೆ ಬಿಇಓ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೈ ಭೀಮ್ ಯುವಸೇನೆ ಹಟ್ಟಿ. ಪ್ರಧಾನ ಕಾರ್ಯದರ್ಶಿ ಸುರೇಶ ಮಾಚನೂರು, ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ಕಡೇಚೂರು ಹಾಗೂ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ್ ರಾಂಪುರ್ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು