6:43 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸರಕಾರಿ ಶಾಲಾ ಮಕ್ಕಳಿಗೆ ಅತ್ಯಾಧುನಿಕ ಡಿಜಿಟಲ್‌ ಶಿಕ್ಷಣ: ಸಿಎಸ್‌ಆರ್‌ ನಿಧಿಯಲ್ಲಿ ಸೌಲಭ್ಯ ಕಲ್ಪಿಸಿದ ಗ್ಲೋಬಲೋಜಿಕ್, ಮೊಬೈವಿಲ್‌, ಇಟಾಚಿ ಕಂಪನಿ

31/01/2025, 20:08

ಬೆಂಗಳೂರು(reporterkarnataka.com): ಸರಕಾರಿ ಶಾಲಾ ಮಕ್ಕಳು ಹಾಗೂ ವಿಶೇಷ ಚೇತನ ಮಕ್ಕಳಿಗೂ ಅಗತ್ಯ ಮೂಲಸೌಕರ್ಯದ ಜೊತೆಗೆ ಡಿಜಿಟಲ್‌ ಶಿಕ್ಷಣ ನೀಡುವ ಉದ್ದೇಶದಿಂದ ಗ್ಲೋಬಲೋಜಿಕ್, ಮೊಬೈವಿಲ್‌ ಹಾಗೂ ಇಟಾಚಿ ಕಂಪನಿಗಳ ಸಹಯೋಗದೊಂದಿಗೆ ಸಿಎಸ್‌ಆರ್‌ ಅಡಿಯಲ್ಲಿ ಹೆಣ್ಣೂರಿನ “ಶ್ರೋಧಂಜಲಿ ಇಂಟಿಗ್ರೇಟೆಡ್‌ ಪ್ರಾಥಮಿಕ ಶಾಲೆ” ಹಾಗೂ ಭಾರತೀಯ ವಿದ್ಯಾನಿಕೇತನ ಹೈಸ್ಕೂಲ್‌ ಗಳಿಗೆ ಪ್ರತ್ಯೇಕವಾಗಿ ಡಿಜಿಟಲೀಕರಣದ ಶಿಕ್ಷಣಕ್ಕೆ ಸಂಬಂಧಿಸಿದ ಉಪಕರಣ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಯಿತು.

ಮೊದಲಿಗೆ, ಗ್ಲೋಬಲೋಜಿಕ್, ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸೆಬಿಲಿಟೀಸ್ (ಎಪಿಡಿ) ಸಹಯೋಗದೊಂದಿಗೆ, ಶ್ರೋಧಂಜಲಿ ಇಂಟಿಗ್ರೇಟೆಡ್ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ 129 ವಿಶೇಷ ಚೇತನ ಮಕ್ಕಳಿಗೆ ಮೂಲಸೌಕರ್ಯಗಳನ್ನು ನೀಡಲಾಯಿತು. ಇಲ್ಲಿನ ವಿಶೇಷ ಚೇತನ ಮಕ್ಕಳಿಗೆ ಶಿಕ್ಷಣ ಕಲಿಯಲು ನೆರವು ನೀಡಲಾಯಿತು. ಇದರ ಜೊತೆಗೆ, ವೈಯಕ್ತಿಕ ಚಿಕಿತ್ಸೆ, ಸಹಾಯಕ ಸಾಧನಗಳು ಸೇರಿದಂತೆ ಈ ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನು ಈ ಸಂಸ್ಥೆಗಳು ವಹಿಸಿಕೊಂಡವು.
ಮತ್ತೊಂದು ಶಾಲೆಯಾದ ಭಾರತೀಯ ವಿದ್ಯಾನಿಕೇತನ ಹೈಸ್ಕೂಲ್‌ನಲ್ಲಿ ಮಕ್ಕಳಿಗೆ ಡಿಜಿಟಲ್‌ ಶಿಕ್ಷಣಕ್ಕೆ ಆದ್ಯತೆ ನೀಡಲಾಯಿತು. 700ಕ್ಕೂ ಅಧಿಕ ಮಕ್ಕಳನ್ನು ಹೊಂದಿರುವ ಈ ಶಾಲೆಯಲ್ಲಿ “ಡಿಜಿ ವಿದ್ಯಾ ಶಾಲಾ” ಕಾರ್ಯಕ್ರಮವನ್ನು ಪ್ರಥಮ್ ಇನ್ಫೋಟೆಕ್ ಫೌಂಡೇಶನ್ ಮತ್ತು ಎಜುಕೇಷನಲ್ ಇನಿಶಿಯೇಟಿವ್ಸ್ (ಇಐ) ಯ ಸಹಯೋಗದೊಂದಿಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಅರಿವಿನ ಸಾಮರ್ಥ್ಯಗಳನ್ನು ಹೆಚ್ಚಿಸಲು ಎಐ-ಚಾಲಿತ ಕಲಿಕೆಯನ್ನು ಇಲ್ಲಿ ನೀಡಲಾಗುತ್ತದೆ. ಮಕ್ಕಳೇ ಲ್ಯಾಪ್‌ಟಾಪ್‌ಗಳನ್ನು ಎಐ ಸಹಾಯದ ಮೂಲಕ ತಮ್ಮ ಶಿಕ್ಷಣವನ್ನು ಪಡೆದುಕೊಳ್ಳಲಿದ್ದಾರೆ. ಈ ಯೋಜನೆಯು ಭಾಷೆ, ಇಂಗ್ಲಿಷ್ ಮತ್ತು ಗಣಿತದಂತಹ ವಿಷಯಗಳಲ್ಲಿ ಸಾಕ್ಷರತೆಯನ್ನು ಸುಧಾರಿಸುವುದಲ್ಲದೆ, ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರ (ಎಫ್‌ಎಲ್‌ಎನ್) ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಗೆ ಸಹಕಾರಿಯಾಗಲಿದೆ.
ಈ ಕುರಿತು ಮಾತನಾಡಿದ ಗ್ಲೋಬಲೋಜಿಕ್‌ನ ಎಂಜಿನಿಯರಿಂಗ್-ಎಪಿಎಸಿ (ಖಾಸಗಿ ಇಕ್ವಿಟಿ, ಹೈ-ಟೆಕ್ ಮತ್ತು ಐಎಸ್ವಿ) ಮುಖ್ಯಸ್ಥ ಮಧುಸೂಧನ್ ಮೂರ್ತಿ, ಅಂತರ್ಗತ ಶಿಕ್ಷಣದ ಮಹತ್ವ ಮತ್ತು ಈ ಉಪಕ್ರಮವು ಸಾಮಾಜಿಕ ಜವಾಬ್ದಾರಿಯತ್ತ ಕಂಪನಿಯ ಬದ್ಧತೆಯನ್ನು ತೋರಿಸುತ್ತದೆ. “ಶಿಕ್ಷಣವು ಸಬಲೀಕರಣಕ್ಕೆ ಅಡಿಪಾಯವಾಗಿದ್ದು, ಈ ಶಾಲೆಗೆ ನಮ್ಮ ಬೆಂಬಲದ ಮೂಲಕ, ಪ್ರತಿ ಮಗುವಿಗೆ ಅವರ ಸವಾಲುಗಳನ್ನು ಲೆಕ್ಕಿಸದೆ ಗುಣಮಟ್ಟದ ಕಲಿಕೆ ಮತ್ತು ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಭವಿಷ್ಯ ನಿರ್ಮಿಸಲು ನೆರವಾಗಲಿದ್ದೇವೆ ಎಂದರು.
ಮೊಬೈವಿಲ್, ಇಂಕ್‌ನ ಸಿಇಒ ರವಿ ತುಮ್ಮಾರುಕುಡಿ ಮಾತನಾಡಿ, ತಂತ್ರಜ್ಞಾನಕ್ಕೆ ಶಿಕ್ಷಣವನ್ನು ಪರಿವರ್ತಿಸುವ ಅಧಿಕಾರವಿದೆ. ಪ್ರಾಜೆಕ್ಟ್ ಮೈಂಡ್‌ಸ್ಪಾರ್ಕ್‌ಗೆ ನಮ್ಮ ಬೆಂಬಲವು ಪ್ರತಿ ಮಗುವಿಗೆ ಅವರ ಹಿನ್ನೆಲೆಯನ್ನು ಲೆಕ್ಕಿಸದೆ, ಇಂದಿನ ಡಿಜಿಟಲ್ ಜಗತ್ತಿನಲ್ಲಿ ಯಶಸ್ವಿಯಾಗಲು ಸರಿಯಾದ ಸಾಧನಗಳು ಮತ್ತು ಅವಕಾಶಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಒಂದು ಹೆಜ್ಜೆಯಾಗಿದೆ ಎಂದು ಅವರು ನುಡಿದರು.
ಸಿಎಸ್ಆರ್ ಮುಖ್ಯಸ್ಥೆ ಮೋನಿಕಾ ವಾಲಿಯಾ ಮಾತನಾಡಿ, ಎರಡೂ ಉಪಕ್ರಮಗಳು ಮತ್ತು ಅವರು ರಚಿಸುವ ಗುರಿ ಹೊಂದಿರುವ ಸಾಮೂಹಿಕ ಪರಿಣಾಮವನ್ನು ಶ್ಲಾಘಿಸಿದರು. “ಸುಸ್ಥಿರ ಬದಲಾವಣೆಯನ್ನು ಸೃಷ್ಟಿಸಲು ನಮ್ಮ ಸಂಪನ್ಮೂಲಗಳನ್ನು ಹೆಚ್ಚಿಸುವುದರಲ್ಲಿ ನಾವು ನಂಬುತ್ತೇವೆ. ಶ್ರೀಧಂಜಲಿ ಇಂಟಿಗ್ರೇಟೆಡ್ ಪ್ರಾಥಮಿಕ ಶಾಲೆಯಲ್ಲಿನ ಅಂತರ್ಗತ ಶಿಕ್ಷಣ ಮಾದರಿ ಮತ್ತು ಪ್ರಾಜೆಕ್ಟ್ ಡಿಜಿ ವಿದ್ಯಾ ಶಾಲಾ ಅವರ ಟೆಕ್-ಚಾಲಿತ ಕಲಿಕೆಯ ವಿಧಾನವು ಸಮಾಜದಲ್ಲಿ ಅರ್ಥಪೂರ್ಣ ಪ್ರಭಾವವನ್ನು ಹೆಚ್ಚಿಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಎಪಿಡಿ ಮತ್ತು ಪಿಐಎಫ್‌ನೊಂದಿಗಿನ ನಮ್ಮ ಸಹಭಾಗಿತ್ವದ ಮೂಲಕ, ವ್ಯವಹಾರಗಳು ಶಿಕ್ಷಣ ಮತ್ತು ಸೇರ್ಪಡೆಗೆ ಹೇಗೆ ಗಣನೀಯ ರೀತಿಯಲ್ಲಿ ಕೊಡುಗೆ ನೀಡುತ್ತವೆ ಎಂಬುದಕ್ಕೆ ಉದಾಹರಣೆಯನ್ನು ನೀಡುವ ಗುರಿ ಹೊಂದಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು