5:22 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು