12:43 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು