12:35 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು