11:25 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಾರ್ವಜನಿಕ ದೀಪಾವಳಿ‌ ಉತ್ಸವ: ಬೆಳಕಿನ ಮರಕ್ಕೆ ಸಾಮೂಹಿಕವಾಗಿ ಹಣತೆ ಹಚ್ಚಿದ ಮಾತೆಯರು

04/11/2024, 18:43

ಬಂಟ್ವಾಳ(reporterkarnataka.com): ಸೀತಾರಾಮ ನಗರದ ಅಶ್ವಥಡಿ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಮಾತೆಯರು ಬೆಳಕಿನ ಮರಕ್ಕೆ ಸಾಮೂಹಿಕವಾಗಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೀಪಾವಳಿ ಉತ್ಸವ ಆಚರಿಸಲಾಯಿತು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಮಧುರಾ ಕಲ್ಲಡ್ಕ ದೀಪಾವಳಿ‌ ಉತ್ಸವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ರಾಜ್ಯವಾಳಿದ ನೆನಪಿನ ಸಂಭ್ರಮದ ಆಚರಣೆಯಾಗಿದೆ. ಬೆಳಕಿನ ಹಬ್ಬ ಮನಸ್ಸಿನ ಕತ್ತಲೆಯನ್ನು‌ ಓಡಿಸಿ ಸುಜ್ಞಾನ ಬೆಳಕು ನೀಡಲಿ.ಸಮಾಜದಲ್ಲಿ‌ ಸಾಮರಸ್ಯ ಜಾಗೃತಗೊಳ್ಳಲಿ ಎಂದು ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು.
ಅಶೋಕ್ ಕುಮಾರ್ ಬರಿಮಾರು ಪೊಳಲಿ ಶೀನಪ್ಪ ಹೆಗಡೆ ವಿರಚಿತ ತುಳುವಾಲ ಬಲಿಯೇಂದ್ರ ತುಳುಪಾಡ್ದನ ವಾಚನ ಮಾಡಿದರು.
ಅಭಾಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ತುಳುನಾಡಿನ ಹಬ್ಬಗಳ ಬಗ್ಗೆ ತಿಳಿಸಿದರು. ಮಾಜಿ ಗ್ರಾಮ ಪಂಚಾಯತ್ ಸದಸ್ಯ ವಂದಿಸಿದರು. ನಾರಾಯಣ ಎಂ.ಪಿ.,ರಾಘವ ಏಣಾಜೆ,ಭಾರತಿ ಪೆರಾಜೆ,ಗಿರಿಜಾ ಅಶ್ವತ್ಥಡಿ, ಶಶಿಕಲಾ ಮಾಧವ,ವಿಟ್ಲ ಮೈತ್ರೇಯಿ ಗುರುಕುಲದ ಜಯಂತಿ ಮಾತಾಜಿ,ಭುಜಂಗ ಮಾಣಿ,ಹೊನ್ನಪ್ಪ ಸಾಲ್ಯಾನ್,ಸದಾಶಿವ‌ ಆಚಾರ್ ಮದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು