1:41 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಸಾರ್ವಜನಿಕರ ಬೇಡಿಕೆಯ ಕಾಮಗಾರಿಗೆ ದಾಖಲೆ ಪ್ರಮಾಣದ ಅನುದಾನ ಬಿಡುಗಡೆ: ಶಾಸಕ ವೇದವ್ಯಾಸ ಕಾಮತ್

16/01/2023, 22:41

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಾಲಿಕೆಯ ಪದವಿಪೂರ್ವ ವಾರ್ಡಿನ ಬೈತುರ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ 32 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ರಾಜ್ಯದಲ್ಲಿ ಅಭಿವೃದ್ಧಿ ಪರ ಸರಕಾರದ ಆಡಳಿತವಿರುವ‌ ಕಾರಣ ಜನೋಪಯೋಗಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿವೆ. ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಪ್ರಯತ್ನ ಸಾಗುತಿದ್ದು ಮುಂಬರುವ ದಿನಗಳಲ್ಲಿ ಇದರ ಫಲಿತಾಂಶ ಸಿಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್, ಸತೀಶ್ ಬೈತುರ್ಲಿ, ರಾಜೇಂದ್ರ, ಗಣೇಶ್ ಆಚಾರ್ಯ, ಬೇಬಿಯಣ್ಣ, ಸೋಮನಾಥ ಚೌಕಿ, ಹರಿಣಿ ಪ್ರೇಮ್, ದಿನೇಶ್ ಜ್ಯೋತಿನಗರ, ರಾಮದಾಸ್, ಕೇಶವ ಚೌಕಿ, ಅರುಣ್ ರಾವ್, ಪ್ರೇಮನಾಥ, ಪ್ರೀಯಾಂಕ, ಬಾಬಣ್ಣ, ಲಕ್ಷ್ಮಣ, ಸುಮಿತ್ರ, ದೇಜಪ್ಪ, ಸುಜಾತ, ಲೀಲಾವತಿ, ಉದಯ, ಹರೀಶ್, ರುಕ್ಸಾನ, ಹರಿಣಿ ರಾಮದಾಸ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು