4:46 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ

15/10/2021, 20:05

ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ  ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ.


ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ
ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ.

ದಸರಾ ಪಿಲಿನಲಿಕೆ: ಸರಕಾರದ ಕೋವಿಡ್ ಮಾರ್ಗಸೂಚಿ ಹಿನ್ನಲೆಯಲ್ಲಿ ಈ ಬಾರಿಯೂ ಮಂಗಳೂರು ದಸರಾ ಮೆರವಣಿಗೆ ಇರುವುದಿಲ್ಲ.  ಆದುದರಿಂದ ಮೆರವಣಿಗೆಯಲ್ಲಿ ವರ್ಷಂಪ್ರತಿ ದೇವಿಗೆ ಹುಲಿನರ್ತನ ಮೂಲಕ‌ ಸೇವೆ ನೀಡುವ ತಂಡಗಳಿಗೆ ಇಂದು ಮಧ್ಯಾಹ್ನ 3.30ರಿಂದ 7ರವರೆಗೆ ದಸರಾ ಪಿಲಿನಲಿಕೆ ಪ್ರದರ್ಶನ ನೀಡಿದವು.

ಕ್ಷೇತ್ರದ ಸಂತೋಷಿ ಕಲಾ ಮಂಟಪದ ಎದುರು ಹಾಕಿರುವ ಬೃಹತ್ ವೇದಿಕೆಯಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು