4:29 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರ: ಯಶ್ ಪಾಲ್ ಸುವರ್ಣ

19/08/2022, 14:29

ಮಂಗಳೂರು(reporterkarnataka.com): ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಪ್ಲೆಕ್ಸ್ ಮಾತ್ರವಲ್ಲ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿ ಅಜ್ಜರಕಾಡಿನ ಬ್ರಹ್ಮಗಿರಿಯಲ್ಲಿ ವೀರ ಸಾವರ್ಕರ್ ಬ್ಯಾನರ್ ಅಳವಡಿಸಿ ವಿವಾದ ಉಂಟಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು,ಪುತ್ಥಳಿ ನಿರ್ಮಾಣದ ಬಗ್ಗೆ ಕೆಲ ಪುಂಡ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಕಾಂಗ್ರೆಸ್ ನಾಯಕರ ಸಾವರ್ಕರ್ ಬಗ್ಗೆ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ.

1970 ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ವೀರ್ ಸರ್ಕಾರ ಅವರ ಭಾವಚಿತ್ರವನ್ನು ಪೋಸ್ಟ್ ಸ್ಟ್ಯಾಂಪ್ ಅನ್ನು ಬಿಡುಗಡೆ ಮಾಡುವ ಮೂಲಕ ದೇಶಕ್ಕೆ ಅವರ ಕೊಡುಗೆ, ವಿಚಾರ ತಿಳಿಸುವ ಕೆಲಸವನ್ನು ಮಾಡಿದ್ದರು ಎಂದ ಯಶ್ನಾಲ್, ಮಾಜಿ ಸಿಎಂ ಸಿದ್ದರಾಮಯ್ಯನವರೇ ನಾನು ನಿಮಗೆ ನೇರವಾಗಿ ಸವಾಲು ಹಾಕುತ್ತಿದ್ದೇನೆ.

ನಿಮಗೆ ತಾಕತ್ತಿದ್ದರೆ ನಿಮ್ಮ ಕಾಂಗ್ರೆಸ್ ಕಛೇರಿಯಲ್ಲಿರುವ ಇಂದಿರಾ ಗಾಂಧಿಯವರ ಭಾವಚಿತ್ರವನ್ನು ತೆಗೆದು ಹಾಕಿ. ಮತ್ತೆ ಈ ಬಗ್ಗೆ ಮಾತನಾಡುವ ನೈತಿಕತೆ ನೀವು ಬನ್ನಿ ಆ ಸಂದರ್ಭದಲ್ಲಿ ನಾವು ನಿಮಗೆ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ.

75 ವರ್ಷದ ಈ ಇಳಿ ವಯಸ್ಸಿನಲ್ಲಿ ಇಂತಹ ಮಾತುಗಳನ್ನು ಆಡುವುದು ಮಾಜಿ ಸಿಎಂ ಆದ ನಿಮಗೆ ಶೋಭೆ ತರುವಂಥದ್ದು ಅಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು