5:42 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು…

ಇತ್ತೀಚಿನ ಸುದ್ದಿ

ಸರ್ವೆ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರ ಮರು ಸೇರ್ಪಡೆಗೆ ಸರಕಾರಕ್ಕೆ ಒತ್ತಾಯ

21/07/2022, 11:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಲೂಕ ಕಚೇರಿ ಮುಂದೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಕೂಡ್ಲಿಗಿ ಇವರಿಂದ ತಹಶೀಲ್ದಾರ್ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲೆಯ ಕೂಡ್ಲಿಗಿ ಸರ್ವೆ ಪಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಲು ಒತ್ತಾಯಿಸಲಾಯಿತು.

ದೇವದಾಸಿಯರಿಗೆ ಒಂದು ವರ್ಷದಿಂದ ಬಾಕಿ ಇರುವ ಪೆನ್ಷನ್ ಹಣ ಕೂಡಲೇ ಬಿಡುಗಡೆ ಮಾಡಬೇಕು. ಸರ್ವೇ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಲು ಒತ್ತಾಯಿಸಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವುದರ ಮೂಲಕ ಮನವಿ ಪತ್ರವನ್ನು ತಹಶೀಲ್ದಾರರ ಸಮ್ಮುಖದಲ್ಲಿ ಉಪ ತಹಶಿಲ್ದಾರ್  ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವದಾಸಿಯರ ಬೇಡಿಕೆಗಳಾದ ಒಂದು ವರ್ಷದಿಂದ ಬಾಕಿ ಪೆನ್ಷನ್ ಹಣ ಬಿಡುಗಡೆ ಮಾಡಬೇಕು, ಸರ್ಕಾರವೇ ಘೋಷಣೆ ಮಾಡಿದ ಪೆನ್ಷನ್ 500 ಜಾರಿ ಮಾಡಬೇಕು ಹಾಗೂ ಸರ್ವೆಪಟ್ಟಿಯಿಂದ ಬಿಟ್ಟು ಹೋದಂತೆ ಮಹಿಳೆಯರನ್ನು ಪುನಃ ಸರ್ವೇಪಟ್ಟಿಗೆ ಸೇರ್ಪಡೆ ಮಾಡಬೇಕು ಹಾಗೂ ಎಲ್ಲಾ ದೇವದಾಸಿ ಮಹಿಳೆಯರಿಗೆ ಉಪಕಸುಬು ಮಾಡಲು 5 ಲಕ್ಷ ಸಾಲ ಸೌಲಭ್ಯ ನೀಡಬೇಕು. ಇದರಲ್ಲಿ ಶೇಕಡ 25ರಷ್ಟು ಹಾಗೂ ಪ್ರತಿದಿನ ಕುಟುಂಬಕ್ಕೆ 80*80 ಚದರ ಅಡಿಯ ಜಾಗ ನೀಡಿ ನಿವೇಶನ ವಸತಿ ಕಲ್ಪಿಸಬೇಕು, ದೇವದಾಸಿ ಮಹಿಳೆಯರಿಗೆ ಕೃಷಿಗೆ ಯೋಗ್ಯವಾದ 5 ಎಕರೆ ಭೂಮಿಯನ್ನು ಕೊಡಬೇಕು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಲು ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಹೀಗೆ ಹತ್ತಾರು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ದೇವದಾಸಿ ವಿಮೋಚನ ಸಂಘದ ತಾಲೂಕು ಅಧ್ಯಕ್ಷರಾದ ಕನಕೇರಿ ವೆಂಕಮ್ಮ ಅವರು ಮಾತನಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು ಹಾಗೂ ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿಯಾದ ಗುನ್ನಳ್ಳಿ ರಾಘವೇಂದ್ರ ಹಾಗೂ ತಾಲೂಕು ದೇವದಾಸಿ ಸಂಘದ ಕಾರ್ಯದರ್ಶಿಯಾದ ದುರ್ಗಮ್ಮ, ದೇವಕ್ಕ, ಹುಲಿಗಮ್ಮ, ಬಸಮ್ಮ, ಉಚ್ಚೆಂಗಮ್ಮ, ಸೋಮಕ್ಕ, ವಿಜಯಮ್ಮ, ಅಂಜಿನಮ್ಮ ಸೇರಿದಂತೆ‌ ಇನ್ನು ಮುಂತಾದವರು  ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು