5:38 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸರ್ವೆ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರ ಮರು ಸೇರ್ಪಡೆಗೆ ಸರಕಾರಕ್ಕೆ ಒತ್ತಾಯ

21/07/2022, 11:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಲೂಕ ಕಚೇರಿ ಮುಂದೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಕೂಡ್ಲಿಗಿ ಇವರಿಂದ ತಹಶೀಲ್ದಾರ್ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲೆಯ ಕೂಡ್ಲಿಗಿ ಸರ್ವೆ ಪಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಲು ಒತ್ತಾಯಿಸಲಾಯಿತು.

ದೇವದಾಸಿಯರಿಗೆ ಒಂದು ವರ್ಷದಿಂದ ಬಾಕಿ ಇರುವ ಪೆನ್ಷನ್ ಹಣ ಕೂಡಲೇ ಬಿಡುಗಡೆ ಮಾಡಬೇಕು. ಸರ್ವೇ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಲು ಒತ್ತಾಯಿಸಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವುದರ ಮೂಲಕ ಮನವಿ ಪತ್ರವನ್ನು ತಹಶೀಲ್ದಾರರ ಸಮ್ಮುಖದಲ್ಲಿ ಉಪ ತಹಶಿಲ್ದಾರ್  ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವದಾಸಿಯರ ಬೇಡಿಕೆಗಳಾದ ಒಂದು ವರ್ಷದಿಂದ ಬಾಕಿ ಪೆನ್ಷನ್ ಹಣ ಬಿಡುಗಡೆ ಮಾಡಬೇಕು, ಸರ್ಕಾರವೇ ಘೋಷಣೆ ಮಾಡಿದ ಪೆನ್ಷನ್ 500 ಜಾರಿ ಮಾಡಬೇಕು ಹಾಗೂ ಸರ್ವೆಪಟ್ಟಿಯಿಂದ ಬಿಟ್ಟು ಹೋದಂತೆ ಮಹಿಳೆಯರನ್ನು ಪುನಃ ಸರ್ವೇಪಟ್ಟಿಗೆ ಸೇರ್ಪಡೆ ಮಾಡಬೇಕು ಹಾಗೂ ಎಲ್ಲಾ ದೇವದಾಸಿ ಮಹಿಳೆಯರಿಗೆ ಉಪಕಸುಬು ಮಾಡಲು 5 ಲಕ್ಷ ಸಾಲ ಸೌಲಭ್ಯ ನೀಡಬೇಕು. ಇದರಲ್ಲಿ ಶೇಕಡ 25ರಷ್ಟು ಹಾಗೂ ಪ್ರತಿದಿನ ಕುಟುಂಬಕ್ಕೆ 80*80 ಚದರ ಅಡಿಯ ಜಾಗ ನೀಡಿ ನಿವೇಶನ ವಸತಿ ಕಲ್ಪಿಸಬೇಕು, ದೇವದಾಸಿ ಮಹಿಳೆಯರಿಗೆ ಕೃಷಿಗೆ ಯೋಗ್ಯವಾದ 5 ಎಕರೆ ಭೂಮಿಯನ್ನು ಕೊಡಬೇಕು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಲು ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಹೀಗೆ ಹತ್ತಾರು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ದೇವದಾಸಿ ವಿಮೋಚನ ಸಂಘದ ತಾಲೂಕು ಅಧ್ಯಕ್ಷರಾದ ಕನಕೇರಿ ವೆಂಕಮ್ಮ ಅವರು ಮಾತನಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು ಹಾಗೂ ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿಯಾದ ಗುನ್ನಳ್ಳಿ ರಾಘವೇಂದ್ರ ಹಾಗೂ ತಾಲೂಕು ದೇವದಾಸಿ ಸಂಘದ ಕಾರ್ಯದರ್ಶಿಯಾದ ದುರ್ಗಮ್ಮ, ದೇವಕ್ಕ, ಹುಲಿಗಮ್ಮ, ಬಸಮ್ಮ, ಉಚ್ಚೆಂಗಮ್ಮ, ಸೋಮಕ್ಕ, ವಿಜಯಮ್ಮ, ಅಂಜಿನಮ್ಮ ಸೇರಿದಂತೆ‌ ಇನ್ನು ಮುಂತಾದವರು  ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು